ABC

Tuesday, 29 January 2019

ರೈತರ ಸಾಲಮನ್ನಾ ಮಾಡದಂತೆ ರಾಷ್ಟ್ರೀಯ ಬ್ಯಾಂಕ್ ಮೇಲೆ ಮೋದಿ ಒತ್ತಡ: ಜೆಡಿಎಸ್‌ ರಾಷ್ಟ್ರೀಯ ವಕ್ತಾರ ಡ್ಯಾನಿಶ್‌ ಅಲಿ

ಬೆಂಗಳೂರು: ಪ್ರಧಾನಿ‌ ಮೋದಿ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರದ ಸಚಿವರೇ ಮೋದಿ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲಮನ್ನಾಗಿ ದುಡ್ಡಿಲ್ಲ ಆದರೆ ಉದ್ಯಮಿಗಳ ಸಾಲಮನ್ನಾಗೆ ದುಡ್ಡಿದೆ. ಸಾಲಮನ್ನಾ ಮಾಡದಂತೆ ಕೇಂದ್ರ ಸರ್ಕಾರ ಅಡಚಣೆ ಉಂಟುಮಾಡುತ್ತಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ವಕ್ತಾರ ಡ್ಯಾನಿಶ್​ ಅಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದಿಂದ ರೈತರ ಸಾಲಮನ್ನಾ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಕಾರ್ಪೊರೇಟ್‌ ಕಂಪನಿಗಳ ಸಾಲಮನ್ನಾದಲ್ಲಿ ತೊಡಗಿದೆ. ರೈತರ ಸಾಲಮನ್ನಾಗೆ ಸರ್ಕಾರದ ಬಳಿ ಹಣವಿಲ್ಲ. ರೈತರ ಸಾಲಮನ್ನಾಗೆ ಅಡಚಣೆ ಉಂಟುಮಾಡುತ್ತಿದ್ದಾರೆ. ಸಾಲಮನ್ನಾ ಮಾಡದಂತೆ ರಾಷ್ಟ್ರೀಯ ಬ್ಯಾಂಕ್ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಯುವ ಜನತೆಗೆ ಮೋದಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಿಲ್ಲ. ರೈತರ ಸಾಲಮನ್ನಾದ ಬಗ್ಗೆ ಯಾವುದೇ ನಿರ್ಧಾರ ಮಾಡುತ್ತಿಲ್ಲ. ಇಂದು ರೈತರು ಕಷ್ಟದಲ್ಲಿದ್ದಾರೆ. ಹೀಗಿದ್ದರೂ ಮೋದಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿದರು.
ದೇಶದ ಮತದಾರರು ಈ ಬಾರಿ‌ ಮೋದಿಗೆ ಪಾಠ ಕಲಿಸುತ್ತಾರೆ. ನಮ್ಮ ಉದ್ದೇಶ ಬಿಜೆಪಿಯ ಶಕ್ತಿಯನ್ನು ಕುಂದಿಸಿ ಮುಂಬುರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಥಾನವನ್ನು ಕಡಿಮೆಗೊಳಿಸುವುದು. ಈ ಬಾರಿ ಲೋಕಸಭೆ ಚುನಾವಣೆಗೆ ಜಾತ್ಯತೀತ ಪಕ್ಷಗಳನ್ನು ಒಂದು ಗೂಡಿಸುವಲ್ಲಿ ದೇವೇಗೌಡರ ಪಾತ್ರ ಮುಖ್ಯವಾಗಿದೆ. ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ನೀಡುತ್ತಿರುವ ಹೇಳಿಕೆ ಬಗ್ಗೆ ಕಾರ್ಯಕಾರಿಣಿಯಲ್ಲಿ ಚರ್ಚಿಸುವುದಿಲ್ಲ. ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದೆ. ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಕರ್ನಾಟಕ, ಮಹಾರಾಷ್ಟ್ರ, ಕೇರಳ, ಯುಪಿ, ಅರುಣಾಚಲ ಪ್ರದೇಶ ದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಪ್ರಪೋಸಲ್ ಇದೆ. ಆಯಾ ರಾಜ್ಯದ ನಾಯಕರು, ಪ್ರಾದೇಶಿಕ ಪಕ್ಷದ ನಾಯಕರ ಜತೆ ಮಾತನಾಡಿ ಸ್ಪರ್ಧೆ ಬಗ್ಗೆ ನಿರ್ಧಾರ ಮಾಡುತ್ತೇವೆ. ದೇಶದ ಇತರೆ ರಾಜ್ಯದಲ್ಲಿ ಜೆಡಿಎಸ್‌ ಎಲ್ಲೆಲ್ಲಿ ಅವಕಾಶ ಇದೆಯೋ, ಎಲ್ಲೆಲ್ಲಿ ಮೈತ್ರಿ ಮಾಡಿಕೊಳ್ಳಲು ಸಾಧ್ಯವೋ ಅಲ್ಲಿ ಸ್ಪರ್ಧೆ ಮಾಡಲಿದೆ. ಈ ಬಾರಿ ಜಾತ್ಯತೀತ ಮತಗಳು ವಿಭಾಗ ಆಗಬಾರದು ಎನ್ನುವುದೇ ನಮ್ಮ ಪ್ರಮುಖ ಉದ್ದೇಶ. ಇದೆಲ್ಲವನ್ನು ಚರ್ಚಿಸಿ ಸ್ಪರ್ಧೆ ಬಗ್ಗೆ ಅಂತಿಮ‌ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...