ABC

Tuesday, 26 February 2019

ಮನೆಯ ಬಾಗಿಲಿಗೆ 100 ಸೇವೆಗಳು ಇದು: ಕುಮಾರಸ್ವಾಮಿಯವರ ಜನಪರ ಯೋಜನೆ.

ಸಿಎಂ ಕುಮಾರಸ್ವಾಮಿಯವರು ಹೊಸದೊಂದು ಜನಪರ ಯೋಜನೆಯನ್ನು ಜಾರಿಗೊಳಿಸಲು ಸಿದ್ದತೆ ನಡೆಸಿದ್ದಾರೆ. ಈ ಯೋಜನೆ ಜಾರಿಯಾದರೆ ನಾಡಿನ ಜನರು ಕೆಲಸ ಕಾರ್ಯ ಬಿಟ್ಟು ಸರ್ಕಾರಿ ಕಛೇರಿಗಳನ್ನು ಅಲೆಯುವ ಕಷ್ಟ ತಪ್ಪಲಿದೆ. 

ಜೊತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ. ಹೌದು, ಅಗತ್ಯ ದಾಖಲೆಗಳನ್ನು ಪಡೆಯಲು ಜನರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕುಮಾರಸ್ವಾಮಿಯವರ ನೇತೃತ್ವದ ಸರ್ಕಾರ ಮುಂದಾಗಿದೆ. ಜನರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲು ಹೊಸ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದ್ದಾರೆ.

ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರ ಇಂತಹ ಯೋಜನೆಯನ್ನು ಜಾರಿಗೆ ತಂದು ಈಗಾಗಲೇ ಯಶಸ್ವಿಯಾಗಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಯೋಜನೆ ಜಾರಿಗೆ ಬರಲಿದೆ. 

ಈ ಯೋಜನೆಯ ಅಡಿಯಲ್ಲಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜನನ ಮತ್ತು ಮರಣ ಪ್ರಮಾಣ ಪತ್ರ, ಹಿರಿಯ ನಾಗರಿಕ ಗುರುತಿನ ಚೀಟಿ ಸೇರಿದಂತೆ 100 ಸೇವೆಗಳನ್ನು ಮೊಬೈಲ್ ಸಹಾಯಕರ ಮೂಲಕ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ.

ಇನ್ನು ಯೋಜನೆಯೂ ಅತ್ಯಂತ ಸುಲಭವಾಗಿದ್ದು  ಜನರು ದೂರವಾಣಿ ಕರೆ ಮಾಡಿ ಯಾವ ಪ್ರಮಾಣ ಪತ್ರ ಬೇಕು ಎಂದು ಹೇಳಬೇಕು. ಅದಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಹಾಯವಾಣಿಯವರು ತಿಳಿಸುತ್ತಾರೆ. ಸಹಾಯಕ ನಿಮ್ಮ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಸಂಗ್ರಹಿಸುತ್ತಾನೆ. ಬಳಿಕ ಸ್ಥಳದಲ್ಲಿಯೇ ಅರ್ಜಿಯನ್ನು ಭರ್ತಿ ಮಾಡಿ 110 ರೂಪಾಯಿಗಳನ್ನು ಪಾವತಿ ಮಾಡಿದರೆ ಅರ್ಜಿಯನ್ನು ಸಂಬಂಧಿಸಿದ ಇಲಾಖೆಗೆ ಸಲ್ಲಿಸಲಾಗುತ್ತದೆ. ಪ್ರಮಾಣ ಪತ್ರಗಳು ಸಿದ್ಧವಾದ ಬಳಿಕ ನಿಮ್ಮ ಮನೆಗೆ ಅದನ್ನು ಸಹಾಯಕ ತಲುಪಿಸುತ್ತಾನೆ. 

ನೆಟ್ವರ್ಕ್ ಕಂಪನಿ:
https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...