ABC

Thursday, 28 February 2019

ಸುದೀರ್ಘ ಕಾರ್ಯಾಚರಣೆಯಿಂದ ಬಂಡೀಪುರ ಅಭಯಾರಣ್ಯಕ್ಕೆ 🔥 ಬೆಂಕಿ ಹಚ್ಚಿದವನ ಬಂಧನ.

ಮೈಸೂರು: ಬಂಡೀಪುರ ಅಭಯಾರಣ್ಯಕ್ಕೆ ಬೆಂಕಿಯಿಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳೀಪುರ ವಾಸಿ ಅರುಣ್‍ಕುಮಾರ್ ಬಂಧಿತ ಆರೋಪಿ. ಫೆ.22ರಂದು ರಾತ್ರಿ ಬಂಡೀಪುರ ಅರಣ್ಯಕ್ಕೆ ಈತ ಬೆಂಕಿಯಿಟ್ಟು ತಲೆ ಮರೆಸಿಕೊಂಡಿದ್ದನು.

ಈ ಬಗ್ಗೆ ತನಿಖೆ ಕೈಗೊಂಡಿದ ಅರಣ್ಯಾಧಿಕಾರಿಗಳು ಸಮೀಪದ ಗ್ರಾಮದ ತಮ್ಮ ಸಂಬಂಧಿಕರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಮಾಹಿತಿ ಕಲೆಹಾಕಿ ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಅರುಣ್‍ಕುಮಾರ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ತಮ್ಮ ಜಮೀನಿನಲ್ಲಿ ರಾತ್ರಿ ವೇಳೆ ಮಲಗುತ್ತಿದ್ದನು. ಫೆ.22ರಂದು ಈತ ಬಂಡಿಪುರ ಅಭಯಾರಣ್ಯಕ್ಕೆ ನಾಲ್ಕು ಕಡೆ ಬೆಂಕಿ ಹಚ್ಚಿದ್ದನು. ಅರಣ್ಯದ ವಾಚರ್ಸ್‍ಗಳು ಬೆಂಕಿ ನೋಡಿ ಅರಣ್ಯಕ್ಕೆ ಹೋಗುವ ಸಂದರ್ಭದಲ್ಲಿ ಈತ ಅಲ್ಲಿಂದ ಪರಾರಿಯಾಗಿ ತಲೆ ಮರೆಸಿಕೊಂಡಿದ್ದನು.ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಗೋಪಾಲಸ್ವಾಮಿ ಬೆಟ್ಟದ ವಲಯ ಆರಣ್ಯಾಧಿಕಾರಿ ಪುಟ್ಟಸ್ವಾಮಿ ಅವರ ತಂಡ ಆರೋಪಿಯನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...