ABC

Wednesday, 20 February 2019

ಮತ್ತೆ ಅಟ್ಟಹಾಸ ಮೆರೆದ ಜೈಷ್ ಉಗ್ರರು: ರೈಲಿನಲ್ಲಿ ಬಾಂಬ್ ಸ್ಫೋಟ

ಕಾನ್ಪುರ: ಪುಲ್ವಾಮಾದಲ್ಲಿ ಕಾರ್‍ಬಾಂಬ್ ಸ್ಫೋಟದ ಮೂಲಕ 44 ಯೋಧರ ಸಾವಿಗೆ ಕಾರಣವಾಗಿದ್ದ ಜೈಶ್ ಉಗ್ರ ಸಂಘಟನೆ ಇದೀಗ ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಕೈ ಹಾಕಿದ್ದು ಉಗ್ರರು ಅಡಗಿಸಿಟ್ಟಿದ್ದ ಬಾಂಬ್ ಕಾಳಿಂದಿ ಎಕ್ಸ್‍ಪ್ರೆಸ್ ರೈಲಿನಲ್ಲಿ ಸ್ಫೋಟವಾಗಿದೆ.ಈ ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರೈಲ್ವೆ ಪೊಲೀಸರು ರೈಲು ನಿಲ್ದಾಣಗಳಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದ್ದು, ತೀವ್ರ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತೆಯೇ ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಪ್ರಯಾಣಿಕರ ಬ್ಯಾಗ್ ಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಿಂದ ಭಿವಾಂಡಿಗೆ ಹೊರಡಲು ಸಿದ್ಧವಾಗಿದ್ದ ರೈಲಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಡಿಮೆ ತೀವ್ರತೆ ಸ್ಫೋಟವಾದ್ದರಿಂದ ಸಾವು-ನೋವುಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ಆದೇಶ ನೀಡಿದ್ದೇವೆ ಎಂದು ಕಾನ್ಪುರ ರೈಲ್ವೆ ನಿರ್ವಹಣಾಧಿಕಾರಿ ಅವಿನಾಶ್ ಚಂದ್ರ ಮಾಹಿತಿ ನೀಡಿದ್ದಾರೆ. ಕಾಳಿಂದಿ ಎಕ್ಸ್‍ಪ್ರೆಸ್  ರೈಲಿನ ಬೋಗಿಯೊಂದರ ಶೌಚಾಲಯದಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಭಿವಾಂಡಿಗೆ ತೆರಳುತ್ತಿದ್ದ ರೈಲು ಬರ್ರಾಜ್ ಪುರ್ ಸ್ಟೇಷನ್ ನಲ್ಲಿ ನಿಂತಾಗ ಈ ಸ್ಫೋಟ ಸಂಭವಿಸಿದೆ. ಅಲ್ಲದೆ ರೈಲಿನಲ್ಲಿ ಜೈಶ್ ಉಗ್ರ ಸಂಘಟನೆಯ ಕರಪತ್ರಗಳೂ ಸಿಕ್ಕಿದ್ದು, ಪತ್ರದಲ್ಲಿ ರೈಲು ಸ್ಫೋಟಿಸುವ ಮತ್ತು ವಿಧ್ವಂಸಕ ಕೃತ್ಯವೆಸಗುವ ಬೆದರಿಕೆ ಹಾಕಲಾಗಿದೆ.ಫೆ.14ರಂದು ಇದೇ ಜೈಶ್ ಉಗ್ರ ಸಂಘಟನೆ ಪುಲ್ವಾಮಾ ಬಳಿ ಸೇನಾಪಡೆಗಳ ಮೇಲೆ ಸುಮಾರು 350 ಕೆಜಿ ಸ್ಫೋಟಕಗಳಿದ್ದ ಕಾರನ್ನು ಸ್ಫೋಟಿಸಿ 44 ಮಂದಿ ಯೋಧರ ಹತ್ಯೆ ಮಾಡಿತ್ತು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...