ABC

Sunday, 10 February 2019

ಸತ್ಯ ಒಪ್ಪಿಕೊಂಡಾಯ್ತು ರಾಜೀನಾಮೆ ಯಾವಾಗ? ಬಿಎಸ್​ವೈಗೆ ಡಿಸಿಎಂ ಪರಮೇಶ್ವರ್​

ತುಮಕೂರು: ಆಪರೇಷನ್​ ಕಮಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರ ಆಡಿಯೋ ತಮ್ಮದೆಂದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದರು. ಆದರೆ ಈಗ ಅವರೇ ಸಂಭಾಷಣೆ ನಡೆದದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಆದ್ದರಿಂದ ರಾಜೀನಾಮೆ ನೀಡಲಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್​ ಅವರು ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಆಡಿಯೋ ಬಗ್ಗೆ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ. ಹಾಗಿದ್ದಮೇಲೆ ಅವರೇ ಹೇಳಿದಂತೆ ರಾಜಕೀಯ ನಿವೃತ್ತಿ ಪಡೆಯಬೇಕು. ಈ ವಿಚಾರವನ್ನು ನಾವು ಸ್ಪೀಕರ್​ ಬಳಿಗೆ ಕೊಂಡೊಯ್ಯುತ್ತೇವೆ. ನಾವು ಕಾನೂನು ಪಾಲಿಸುವವರು. ಆದ್ದರಿಂದ ಇದನ್ನು ಸ್ಪೀಕರ್​ಗೆ ತಿಳಿಸುತ್ತೇವೆ. ನಂತರ ಅವರು ಯಾವುದಾದರೂ ಕ್ರಮ ಕೈಗೊಳ್ಳಲಿ. ಕಾನೂನಿನ ಪ್ರಕಾರ ಯಡಿಯೂರಪ್ಪ ಅವರ ಶಾಸಕತ್ವ ಅನರ್ಹ ಆಗಬೇಕು ಎಂದೂ ಹೇಳಿದರು.
ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕೀಳು ಮಟ್ಟದ ರಾಜಕಾರಣಕ್ಕಿಳಿದಿದೆ ಎಂದು ಪರಮೇಶ್ವರ್​ ವಾಗ್ದಾಳಿ ನಡೆಸಿದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...