ABC

Sunday, 3 February 2019

ನನಗೆ ಏನಾದ್ರು ಆದರೆ ಮೋದಿಯವರೆ ನೇರಹೊಣೆ ಉಪವಾಸ ನಿರತ ಅಣ್ಣಾ ಹಜಾರೆ ಹೇಳಿಕೆ

ಕೇಂದ್ರದಲ್ಲಿ ಲೋಕಪಾಲ್‌ ಮಸೂದೆ ಹಾಗೂ ರಾಜ್ಯಗಳಲ್ಲಿ ಲೋಕಾಯುಕ್ತ  ಜಾರಿಗೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ಆಚರಿಸುತ್ತಿರುವ ಅಣ್ಣಾ ಹಜಾರೆ, ನನಗೇನಾದರೂ ಆದರೆ ಪ್ರಧಾನಿ ನರೇಂದ್ರ ಮೋದಿಯೇ ಅದಕ್ಕೆ ಕಾರಣ ಎಂದು ಹೇಳಿದ್ದಾರೆ.
81 ವರ್ಷದ ಅಣ್ಣಾ ಹಜಾರೆ ಜ.30ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜನ ನನ್ನನ್ನು ಪರಿಸ್ಥಿತಿಯನ್ನು ನಿಭಾಯಿಸಿದ ವ್ಯಕ್ತಿ ಎನ್ನುತ್ತಾರೆ. ಒಂದು ವೇಳೆ ನನಗೇನಾದರೂ ಆದರೆ  ಪ್ರಧಾನಿ ಮೋದಿಯಲ್ಲಿ ಕೇಳಬೇಕು ಎಂದಿದ್ದಾರೆ.
ಒಂದು ವೇಳೆ ಲೋಕಪಾಲ್ ಅನುಷ್ಠಾನಗೊಳ್ಳುವುದು ಎಂದರೆ ಪ್ರಧಾನಿಗೆ ಭಯ ತರಿಸುತ್ತಿದೆ. ಲೋಕಪಲ್ ತನಿಖಾ ವ್ಯಾಪ್ತಿಗೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಸೇರಿದಂತೆ ಎಲ್ಲರೂ ಒಳಪಡುತ್ತಾರೆ. ಇದು ಕೆಲವರಿಗೆ ಭಯ ತಂದಿದೆ ಎಂದು ಹೇಳಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...