ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರ ಬಿಡುಗಡೆ ದಿನಾಂಕವನ್ನು ನಿರ್ಮಾಪಕ ಮುನಿರತ್ನ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಇಂದು ರಾಜರಾಜೇಶ್ಚರಿನಗರ ಶಾಸಕ, ನಿರ್ಮಾಪಕ ಮುನಿರತ್ನ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, “ಕುರುಕ್ಷೇತ್ರ ಚಿತ್ರ ಏಪ್ರಿಲ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಕುರುಕ್ಷೇತ್ರ ಸಿನಿಮಾ ಬಿಡುಗಡೆಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದರು. ಆದರೆ ಸಿನಿಮಾ ಬಿಡುಗಡೆಯಾಗುವುದಕ್ಕೆ ತಡವಾಗುತ್ತಿತ್ತು. ಇದಕ್ಕೆ ಸ್ವತಃ ಮುನಿರತ್ನ ಅವರೇ ಈ ಹಿಂದೆ ಸ್ಪಷ್ಟನೆ ಕೊಟ್ಟಿದ್ದರು. `ಕುರುಕ್ಷೇತ್ರ’ ಒಂದು ಪೌರಾಣಿಕ ಸಿನಿಮಾವಾಗಿದ್ದು, ಈ ಸಿನಿಮಾದಲ್ಲಿ ಕಂಪ್ಯೂಟರ್ ಗ್ರಾಫಿಕ್ಸ್ (ಸಿಜೆ) ಕೆಲಸ ತುಂಬಾ ಇದೆ. ಆದರೆ ನಾವು ಅಂದುಕೊಂಡ ಹಾಗೆ ಬರುತ್ತಿಲ್ಲ. ಅದಕ್ಕೆ ಪದೇ ಪದೇ ರೀ- ವರ್ಕ್ ಮಾಡುತ್ತಿದ್ದೇವೆ. ಆದ್ದರಿಂದ ಈ ಸಿನಿಮಾ ಬಿಡುಗಡೆಗೆ ತಡವಾಗುತ್ತಿದೆ ಎಂದು ತಿಳಿಸಿದ್ದರು.
ಇಂದು ರಾಜರಾಜೇಶ್ಚರಿನಗರ ಶಾಸಕ, ನಿರ್ಮಾಪಕ ಮುನಿರತ್ನ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, “ಕುರುಕ್ಷೇತ್ರ ಚಿತ್ರ ಏಪ್ರಿಲ್ 5ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ” ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿದ ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರ ಬಿಡುಗಡೆ ದಿನಾಂಕ 5ಕೆ ನಿರ್ಮಾಪಕ ಮುನಿರತ್ನ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
No comments:
Post a Comment