ABC

Monday, 25 February 2019

ನಿಖಿಲ್ ರವರ ರಾಜಕೀಯ ಭವಿಷ್ಯಕ್ಕಾಗಿ ಹರಕೆ ಹೊತ್ತ: ಅನಿತಾ ಕುಮಾರಸ್ವಾಮಿ.

ಮಂಡ್ಯ: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯಕ್ಕಾಗಿ ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣ ಹೊರವಲಯದಲ್ಲಿರುವ ಹೊಳೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಅನಿತಾ ಕುಮಾರಸ್ವಾಮಿ ಅವರು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದರು.ನಿಖಿಲ್‍ಗೆ ಟಿಕೆಟ್ ಸಿಕ್ಕಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಅವರು ಪ್ರಾರ್ಥಿಸಿದರು. ಹೊಳೆ ಆಂಜನೇಯಸ್ವಾಮಿ ದೇಗುಲಕ್ಕೆ ಒಂದುಕಾಲು ರೂಪಾಯಿ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಎಂಬ ನಂಬಿಕೆ ಇದೆ. ಹಾಗಾಗಿ ಅನಿತಾ ಕುಮಾರಸ್ವಾಮಿ ಅವರು ಇಂದು ತಮ್ಮ ಪುತ್ರನಿಗಾಗಿ ಈ ಹರಕೆ ಸಲ್ಲಿಸಿದರು.

ಪೂಜೆ ನಂತರ ನಿಖಿಲ್‍ಗೆ ಎಲ್ಲ ರೀತಿಯ ಒಳಿತಾಗಲಿ ಎಂದು ಹರಕೆ ಸಲ್ಲಿಸಿರುವುದಾಗಿ ಹೇಳಿದರು. ರಾಜಕೀಯ ಭವಿಷ್ಯಕ್ಕಾಗಿಯೇ ಅನಿತಾ ಕುಮರಾಸ್ವಾಮಿ ಹರಕೆ ಹೊತ್ತಿದ್ದಾರೆ ಎಂದು ಮಂಡ್ಯ ಜನರು ಚರ್ಚೆ ಪ್ರಾರಂಭಿಸಿದ್ದಾರೆ.

ಆನ್ಲೈನ್ ಬಿಸಿನೆಸ್ ಲಿಂಕ್:
https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...