ABC

Sunday, 24 February 2019

ಬಂಡೀಪುರ ಅಗ್ನಿ ಶಮನಕ್ಕೆ ಬ್ರಹ್ಮಾಸ್ತ್ರ: ಕಾಡಿನ ರಕ್ಷಣೆಗೆ ಕುಮಾರಸ್ವಾಮಿಯವರ ಮಹತ್ವದ ಕಾರ್ಯ.

ಸಿಎಂ ಕೋರಿಕೆಯಂತೆ ಬಂಡೀಪುರ ಪರಿಸ್ಥಿತಿ ನಿಯಂತ್ರಣಕ್ಕೆ ವಾಯುಪಡೆ ಕಾರ್ಯಾಚರಣೆ ಆರಂಭ
ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆಯಂತೆ ವಾಯುಸೇನೆಯ 2 ರಿಂದ 4 ವಿಮಾನಗಳು ಈಗ ಬಂಡೀಪುರದಲ್ಲಿ ಬೆಂಕಿ ಬಿದ್ದಿರುವ ಜಾಗಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಬೆಂಕಿ ನಂದಿಸಲು ಹೆಚ್ ಡಿ ಕೋಟೆಯ ನುಗು ಜಲಾಶಯದಿಂದ ನೀರು ತೆಗೆದುಕೊಂಡು ಬಂಡೀಪುರ ಅರಣ್ಯಕ್ಕೆ ಬೆಂಕಿ ನಂದಿಸಲು ವಾಯು ನೆಲೆ ಚಿಂತಿಸುತ್ತಿದೆ.
ಪುರ ಮೀಸಲು ಅರಣ್ಯದಲ್ಲಿನ ಅಗ್ನಿ ಅನಾಹುತವನ್ನು ತಕ್ಷಣ ತಹಬಂದಿಗೆ ತರುವ ಬಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಮತ್ತು ಅಗ್ನಿಶಾಮಕ ಕಾರ್ಯದರ್ಶಿಗಳ ಜೊತೆಗೆ ಮಾತುಕತೆ ನಡೆಸಿದ ಅವರು ಇಲ್ಲಿಯವರೆಗೆ ಅಗ್ನಿ ನಂದಿಸಲು ನಡೆದಿರುವ ಕಾರ್ಯಾಚರಣೆಯನ್ನು ಪರಿಶೀಲಿಸಿದರು.ಬಂಡೀಪುರದಲ್ಲಿ ಬೆಂಕಿ ವ್ಯಾಪಿಸದಿರುವ ನಿಟ್ಟಿನಲ್ಲಿ ವಾಯುದಳದ ಸಹಾಯ ಪಡೆಯುವ ಬಗ್ಗೆ ಮುಖ್ಯಮಂತ್ರಿಗಳು ವಾಯುಪಡೆ ಮುಖ್ಯಸ್ಥರೊಂದಿಗೆ ಮಾತನಾಡಿದರು. ವಾಯುದಳದ ಮುಖ್ಯಸ್ಥರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಕಾರ್ಯಾಚರಣೆ ಆರಂಭವಾಗಿದೆ.

ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಥಳದಲ್ಲಿಯೇ ಇದ್ದು, ಮುಖ್ಯಮಂತ್ರಿಗಳು ಕಾರ್ಯಾಚರಣೆಯ ಎಲ್ಲಾ ಮಾಹಿತಿಯನ್ನು ಕಾಲ ಕಾಲಕ್ಕೆ ಪಡೆಯುತ್ತಿದ್ದಾರೆ. ಬಂಡೀಪುರದಲ್ಲಿ ಬೆಂಕಿ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಪೂರಕ ಸಹಾಯ ಸೌಲಭ್ಯಗಳನ್ನು ತಕ್ಷಣವೇ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಹಿರಿಯ ಅಧಿಕಾರಿಗಳು ಹಾಗೂ ಹೆಚ್ಚ್ಚುವರಿ ಸಿಬ್ಬಂದಿಯನ್ನು ತಕ್ಷಣ ಸ್ಥಳಕ್ಕೆ ಕಳಿಸಲು ತಿಳಿಸಿದರು.ಇಡೀ ಕಾರ್ಯಾಚರಣೆಯನ್ನು ಖುದ್ದು ಮೇಲುಸ್ತುವಾರಿ ವಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

https://play.google.com/store/apps/details?id=com.application.onead&referrer=GFN1E0 Sign up with OneAD app. You can earn up to 2.5 L monthly OneAD Balance. Your referral code for registration is GFN1E0 . Register today

ಈ ಮಧ್ಯೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವವರೆಗೆ ಬಂಡೀಪುರ ಅರಣ್ಯ ಪ್ರದೇಶಕ್ಕೆ ಸಾರ್ವಜನಿಕರು ಭೇಟಿ ನೀಡಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...