ಬೆಂಗಳೂರು: ಇತ್ತೀಚೆಗಷ್ಟೇ ಜೆಡಿಎಸ್ ಸೇರಿದ್ದ ಅರುಣಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಜಿಗಾಂಗ್ ಅಪಾಂಗ್ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಅಲ್ಲದೆ, ಈಶಾನ್ಯ ರಾಜ್ಯಗಳ ಪಕ್ಷದ ಉಸ್ತುವಾರಿ ವಹಿಸಲಾಗಿದೆ.
ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಆದೇಶದಂತೆ ಮಾಧ್ಯಮಗಳಿಗೆ ಡ್ಯಾನಿಷ್ ಅಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅಪಾಂಗ್ ಅವರನ್ನು ಜೆಡಿಎಸ್ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ, ಈಶಾನ್ಯ ರಾಜ್ಯಗಳ ಉಸ್ತುವಾರಿ ವಹಿಸಿ ಈ ಕೂಡಲೇ ಜಾರಿಗೆ ಬರುವಂತೆ ದೇವೇಗೌಡರು ಅದೇಶಿಸಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.ಮೂಲತಃ ಕಾಂಗ್ರೆಸಿಗರಾಗದ ಜಿಗಾಂಗ್ ಅಪಾಂಗ್ ಅರುಣಾಚಲ ಪ್ರದೇಸ ಮುಖ್ಯಮಂತ್ರಿಯಾಗಿ 23 ವರ್ಷ ಆಡಳಿತ ಮಾಡಿದ್ದುರ. 1980ರ ರಿಂದ 1999ರ ವರೆಗೆ ಮೊದಲ ಬಾರಿಗೆ ಅವರು ಅಧಿಕಾರ ನಡೆಸಿದ್ದರು. ನಂತರ ಅರುಣಾಚಲ ಕಾಂಗ್ರೆಸ್ ಕಟ್ಟಿದ್ದ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ 2003ರಲ್ಲಿ ಬಿಜೆಪಿ ಸೇರಿದ್ದರು. ಈ ಮೂಲಕ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ದಕ್ಕಿಸಿಕೊಟ್ಟಿದ್ದರು. 2004ರ ಸಾರ್ವತ್ರಿಕ ಚುನಾವಣೆಯ ನಂತರ ಅವರು ಮರಳಿ ಕಾಂಗ್ರೆಸ್ ಸೇರಿದ್ದರು. ಆಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ನಿಂದ ಅಪಾಂಗ್ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2007ರ ವರೆಗೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರು. ಕಾಂಗ್ರೆಸ್ ಅವರನ್ನು ಅಧಿಕಾರದಿಂದ ಇಳಿಸಿದಾಗ ಬಿಜೆಪಿ ಸೇರಿದ್ದರು. ಸದ್ಯ ಬಿಜೆಪಿ ತೊರೆದಿರುವ ಅವರು, ಕರ್ನಾಟಕ ಮೂಲದ, ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳ ಸೇರಿದ್ದಾರೆ.
ಈ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಆದೇಶದಂತೆ ಮಾಧ್ಯಮಗಳಿಗೆ ಡ್ಯಾನಿಷ್ ಅಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅಪಾಂಗ್ ಅವರನ್ನು ಜೆಡಿಎಸ್ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿ, ಈಶಾನ್ಯ ರಾಜ್ಯಗಳ ಉಸ್ತುವಾರಿ ವಹಿಸಿ ಈ ಕೂಡಲೇ ಜಾರಿಗೆ ಬರುವಂತೆ ದೇವೇಗೌಡರು ಅದೇಶಿಸಿದ್ದಾರೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.ಮೂಲತಃ ಕಾಂಗ್ರೆಸಿಗರಾಗದ ಜಿಗಾಂಗ್ ಅಪಾಂಗ್ ಅರುಣಾಚಲ ಪ್ರದೇಸ ಮುಖ್ಯಮಂತ್ರಿಯಾಗಿ 23 ವರ್ಷ ಆಡಳಿತ ಮಾಡಿದ್ದುರ. 1980ರ ರಿಂದ 1999ರ ವರೆಗೆ ಮೊದಲ ಬಾರಿಗೆ ಅವರು ಅಧಿಕಾರ ನಡೆಸಿದ್ದರು. ನಂತರ ಅರುಣಾಚಲ ಕಾಂಗ್ರೆಸ್ ಕಟ್ಟಿದ್ದ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ 2003ರಲ್ಲಿ ಬಿಜೆಪಿ ಸೇರಿದ್ದರು. ಈ ಮೂಲಕ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ದಕ್ಕಿಸಿಕೊಟ್ಟಿದ್ದರು. 2004ರ ಸಾರ್ವತ್ರಿಕ ಚುನಾವಣೆಯ ನಂತರ ಅವರು ಮರಳಿ ಕಾಂಗ್ರೆಸ್ ಸೇರಿದ್ದರು. ಆಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ನಿಂದ ಅಪಾಂಗ್ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. 2007ರ ವರೆಗೆ ಅವರು ಮುಖ್ಯಮಂತ್ರಿಯಾಗಿ ಮುಂದುವರಿದಿದ್ದರು. ಕಾಂಗ್ರೆಸ್ ಅವರನ್ನು ಅಧಿಕಾರದಿಂದ ಇಳಿಸಿದಾಗ ಬಿಜೆಪಿ ಸೇರಿದ್ದರು. ಸದ್ಯ ಬಿಜೆಪಿ ತೊರೆದಿರುವ ಅವರು, ಕರ್ನಾಟಕ ಮೂಲದ, ದೇವೇಗೌಡರ ನೇತೃತ್ವದ ಜಾತ್ಯತೀತ ಜನತಾದಳ ಸೇರಿದ್ದಾರೆ.
No comments:
Post a Comment