ಬಾಗಲಕೋಟೆ: ದೇವೇಗೌಡರಿಂದ ಮಾತ್ರ ಹಾಸನ ಗೆಲ್ಲೋಕೆ ಸಾಧ್ಯ. ಪ್ರಜ್ವಲ್ಗೆ ಸಾಧ್ಯವಿಲ್ಲ ಎಂಬ ಮಾಜಿ ಸಚಿವ ಎ. ಮಂಜು ಹೇಳಿಕೆಗೆ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ತಿರುಗೇಟು ನೀಡಿದ್ದಾರೆ. ನಿನ್ನೆ ತಡರಾತ್ರಿ ಬಾಗಲಕೋಟೆಯಲ್ಲಿ ಮಾತನಾಡಿದ ರೇವಣ್ಣ, ಎ. ಮಂಜುರನ್ನು ಏಕವಚನದಲ್ಲೇ ತರಾಟೆ ತೆಗೆದುಕೊಂಡಿದ್ದಾರೆ. ಎ. ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡೊಕಾಗುತ್ತೇನ್ರಿ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಾಕಾಗುತ್ತೇನ್ರಿ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ. ಇಗ್ನೋರ್ ಮಾಡ್ತೀನಿ. ಇಷ್ಟೊತ್ತಲ್ಲಿ ಯಾಕ್ರಿ ಅವನು ನೆನಪು ಮಾಡ್ಕೊಂತೀರಾ? ಅಂತಾ ವಾಗ್ದಾಳಿ ನಡೆಸಿದ್ದಾರೆ.
‘ಕಾಂಗ್ರೆಸ್ ಟಿಕೆಟ್ ಕೊಟ್ರೆ ನಾನೇ ಗೆಲ್ತೀನಿ’
ಇದೇ ವೇಳೆ ಹಾಸನ ಲೋಕಸಭೆ ಕ್ಷೇತ್ರದ ಟಿಕೆಟ್ಗೆ ಸಂಬಂಧ ಪ್ರತಿಕ್ರಿಯಿಸಿದ ರೇವಣ್ಣ, ‘ಈ ಸಾರಿ ಹಾಸನ ಲೋಕಸಭೆಗೆ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ರೂ ನಾನೇ ಗೆಲ್ತೀನಿ. ಹಾಸನದಲ್ಲಿ ದೇವೇಗೌಡರು ಅಥವಾ ಪ್ರಜ್ವಲ್ ಯಾರು ಸ್ಪರ್ಧೆ ಮಾಡಬೇಕು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಅಂತಾ ಹಾಸ್ಯ ಚಟಾಕಿ ಹಾರಿಸಿದ್ರು.
‘ಕಾಂಗ್ರೆಸ್ ಟಿಕೆಟ್ ಕೊಟ್ರೆ ನಾನೇ ಗೆಲ್ತೀನಿ’
ಇದೇ ವೇಳೆ ಹಾಸನ ಲೋಕಸಭೆ ಕ್ಷೇತ್ರದ ಟಿಕೆಟ್ಗೆ ಸಂಬಂಧ ಪ್ರತಿಕ್ರಿಯಿಸಿದ ರೇವಣ್ಣ, ‘ಈ ಸಾರಿ ಹಾಸನ ಲೋಕಸಭೆಗೆ ಕಾಂಗ್ರೆಸ್ನಿಂದ ಟಿಕೆಟ್ ಕೊಟ್ರೂ ನಾನೇ ಗೆಲ್ತೀನಿ. ಹಾಸನದಲ್ಲಿ ದೇವೇಗೌಡರು ಅಥವಾ ಪ್ರಜ್ವಲ್ ಯಾರು ಸ್ಪರ್ಧೆ ಮಾಡಬೇಕು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಅಂತಾ ಹಾಸ್ಯ ಚಟಾಕಿ ಹಾರಿಸಿದ್ರು.

No comments:
Post a Comment