ABC

Friday, 29 March 2019

ಕಳೆದ 5 ವರ್ಷದಲ್ಲಿ ಮೋದಿ ಭಾಷಣ ಬಿಟ್ಟರೆ ಮತ್ತೇನೂ ಮಾಡಿಲ್ಲ : ಡಿ.ಕೆ.ಸುರೇಶ್.

ಕನಕಪುರ:  ಪ್ರಧಾನಮಂತ್ರಿ ನರೇಂದ್ರಮೋದಿ ಕಳೆದ ಐದು ವರ್ಷಗಳಲ್ಲಿ ಕೇವಲ ಭಾಷಣಗಳಿಂದಲೇ ದೇಶದ ಜನರನ್ನು ಮಂತ್ರಮುಗ್ಧಗೊಳಿಸಿದ್ದು, ಇದರಿಂದ ಬಡಜನರಿಗೆ ಹಾಗೂ ರೈತರಿಗೆ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಬೆಂಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.ಕೀರಣಗೆರೆ ಜಗದೀಶ್‍ರವರ ತೋಟದಲ್ಲಿ ನಡೆದ ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿಯ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ರೈತರ ಜೀವನ ಸಂಕಷ್ಟಕ್ಕೆ ಹಿಡಾಗಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದೆ. ಪ್ರಧಾನಮಂತ್ರಿ ನೀಡಿದ್ದ ಒಂದು ಭರವಸೆಯನ್ನು ಹಿಡೆರಿಸಿಲ್ಲ ಎಂದು ದೂರಿದರು.
ಬಿಜೆಪಿ ಅಭ್ಯರ್ಥಿ ಕ್ಷೇತ್ರದ ಮತದಾರರಿಗೆ ಪರಿಚಯವೇ ಇಲ್ಲದವರನ್ನು ನಿಲ್ಲಿಸಿದ್ದು, ಮೋದಿಯವರನ್ನು ತೋರಿಸಿ, ಮತ ಕೇಳಿತಿದ್ದು, ಆದರೆ, ನಾವು ಐದು ವರ್ಷದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಸಿದಂತಹ ಅಭಿವೃದ್ದಿ ಕಾರ್ಯಗಳ ಮೇಲೆ ಮತ ಕೇಳುತ್ತಿದ್ದೇವೆ ಎಂದರು.ವಿಶೇಷವಾಗಿ ಈ ಚುನಾವಣೆಯು ಕಾಂಗ್ರೆಸ್ ಮತ್ತು ಜೆ.ಡಿ.ಎಸ್ ಪಕ್ಷದ ಮೈತ್ರಿಯಿಂದ ಬಲಬಂದಿದ್ದು, ಎರಡು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ತಮ್ಮಲ್ಲಿರುವ ವೈಮನಸನ್ನು ಮರೆತು ತಮ್ಮ ಗ್ರಾಮಗಳಲ್ಲಿ ಪ್ರತಿಯೊಬ್ಬ ಮತದಾರನಿಗೂ ನಮ್ಮ ಸಾಧನೆಯನ್ನು ತಿಳಿಸಿ ಅತಿ ಹೆಚ್ಚು ಅಂತರದಿಂದ ಗೆಲ್ಲಿಸಲು ಶ್ರಮವಹಿಸಬೇಕೆಂದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಣ್ಣಿನ ಮಕ್ಕಳಾದರೆ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್‍ರವರು ನೀರಿನ ಮಕ್ಕಳು ಎಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಿರಣಗೆರೆ ಜಗದೀಶ್ ಹೇಳಿದರು.ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿಯ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿ, ಇಂದು ರಾಜ್ಯದಲ್ಲಿ ರಾಜ್ಯಾತೀತ ಪಕ್ಷಗಳು ಒಂದುಗೂಡಿ ಸರ್ಕಾರ ರಚಿಸಿದ್ದು, ರೈತಪರ ಹಾಗೂ ಬಡವರಪರ ಇರುವ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿ ಮಾಡಲು ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್‍ರವರು ಸಂಪೂರ್ಣ ಸಹಕಾರವನ್ನು ನೀಡಿದ್ದು, ಜಿಲ್ಲೆಯ ಅಭಿವೃದ್ದಿಗೆ ಇಬ್ಬರೂ ಮಹಾನ್ ನಾಯಕರು ಟೊಂಕ ಕಟ್ಟಿ ನಿಂತಿದ್ದಾರೆ.
ರಾಜ್ಯದ ಇತಿಹಾಸದಲ್ಲೇ 50 ಸಾವಿರ ರೂಪಾಯಿಗಳು ಸಾಲಮನ್ನ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ರಾಮನಗರ ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಪಂ ಅಧ್ಯಕ್ಷ ನಾಗರಾಜ್, ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ರಾಜಶೇಖರ್, ಮುಖಂಡರಾದ ಭುಜಂಗಯ್ಯ, ರಾಮಕೃಷ್ಣ, ಉಮೇಶ್, ಮಲ್ಲಪ್ಪ, ರಾಮು, ಲಕ್ಷ್ಮಣ, ಸೋಮಶೇಖರ್, ಶಾರದರಾಜು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜೆ.ಸಿ.ಬಿ ಅಶೋಕ್, ಕೀರಣಗೆರೆ ಜಗದೀಶ್, ಜಿ.ಪಂ.ಸದಸ್ಯ ಹೆಚ್.ಕೆ.ನಾಗರಾಜು, ಮುಖಂಡರಾದ ಸರ್ಬ್ದರ್ ಹುಸೇನ್, ಮೊಹಮ್ಮೊದ್ ಯಜಜ್ಸ್, ಹೊನ್ನಾಲಗನದೊಡ್ಡಿ ಹರೀಶ್, ಗೀತಾ ಈಶ್ವರ್, ಶ್ರೀಕಂಠಯ್ಯ, ಮೋಹನ್ ಆಳ್ವ, ಗುರುಪ್ರಸಾದ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

No comments:

Post a Comment

ಮಂಡ್ಯದಲ್ಲಿ ಜೋಡಿಯಾಗಿ ಚುನಾವಣಾ ಪ್ರಚಾರಕ್ಕಿಳಿಯಲಿದ್ದಾರೆ ಗುರು-ಶಿಷ್ಯರು.

ಕೆ.ಆರ್.ಪೇಟೆ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ರಾಷ್ಟ್ರಮಟ್ಟದಲ್ಲಿ ಒಂದಾಗಿವೆ. ದೆಹಲಿಯಲ್ಲಿ ಎಐಸಿಸಿ...